ಶಬರಿಮಲೆ ವಿವಾದ: ರಾಹುಲ್ ಈಶ್ವರ್ ಜಾಮೀನು ರದ್ದು, ಬಂಧನಕ್ಕೆ ಕೋರ್ಟ್ ಆದೇಶ

ಷರತ್ತುಗಳನ್ನು ಉಲ್ಲಂಘಿಸಿದ ಅಯ್ಯಪ್ಪ ಧರ್ಮ ಸೇನಾ ಅಧ್ಯಕ್ಷ ರಾಹುಲ್ ಈಶ್ವರ್ ಅವರ ಜಾಮೀನು ಅರ್ಜಿಯನ್ನು ಶನಿವಾರ...
ರಾಹುಲ್ ಈಶ್ವರ್
ರಾಹುಲ್ ಈಶ್ವರ್
Updated on
ಚೆನ್ನೈ: ಷರತ್ತುಗಳನ್ನು ಉಲ್ಲಂಘಿಸಿದ ಅಯ್ಯಪ್ಪ ಧರ್ಮ ಸೇನಾ ಅಧ್ಯಕ್ಷ ರಾಹುಲ್ ಈಶ್ವರ್ ಅವರ ಜಾಮೀನು ಅರ್ಜಿಯನ್ನು ಶನಿವಾರ ತಮಿಳುನಾಡು ಕೋಟ್ ರದ್ದುಗೊಳಿಸಿದ್ದು, ಆರೋಪಿಯನ್ನು ಬಂಧಿಸುವಂತೆ ಪೊಲೀಸರಿಗೆ ಆದೇಶಿಸಿದೆ.
ಸುಪ್ರೀಂ ಕೋರ್ಟ್ ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಅವಕಾಶ ನೀಡಿದ ನಂತರ ಅಕ್ಟೋಬರ್ 17ರಂದು ಮಹಿಳೆಯರ ಪ್ರವೇಶ ವಿರೋಧಿಸಿ ಪಂಪದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಈಶ್ವರ್ ಅವರನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. 
ಜಾಮೀನು ಷರತ್ತುಗಳ ಪ್ರಕಾರ, ರಾಹುಲ್ ಈಶ್ವರ್ ಅವರು ಪ್ರತಿ ಶನಿವಾರ ಪೊಲೀಸ್ ಠಾಣೆಗೆ ಹಾಜರಾಗಬೇಕಿತ್ತು. ಆದರೆ ಕಳೆದ ಶನಿವಾರ ಪಂಪ ಪೊಲೀಸ್ ಠಾಣೆಗೆ ಹಾಜರಾಗದ ರಾಹುಲ್ ಈಶ್ವರ್ ಅವರ ಜಾಮೀನನ್ನು ಕೋರ್ಟ್ ಇಂದು ರದ್ದುಗೊಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com