ಭೂಪಾಲ್ : ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಕಮಲ್ ನಾಥ್ ಪ್ರಮಾಣ ವಚನ ಸ್ವೀಕರಿಸಿದ ಒಂದು ಗಂಟೆ ಅವಧಿಯಲ್ಲೇ ರೈತರ ಸಾಲ ಮನ್ನಾ ಘೋಷಣೆ ಮಾಡಿದ್ದಾರೆ.
ಮಧ್ಯಪ್ರದೇಶ ಚುನಾವಣಾ ಪ್ರಚಾರ ವೇಳೆಯಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿತ್ತು. ಅದರಂತೆ ತನ್ನ ಕಚೇರಿಗೆ ಆಗಮಿಸುತ್ತಿದ್ದಂತೆ ಕಮಲ್ ನಾಥ್ ರೈತರ ಸಾಲ ಮನ್ನಾ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.
ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿನ 2 ಲಕ್ಷ ರೂ. ವರೆಗಿನ ಮಾರ್ಚ್ 31ರವರೆಗಿನ ರೈತರ ಸಾಲ ಮನ್ನಾ ಮಾಡಲು ಕಮಲ್ ನಾಥ್ ಸಹಿ ಹಾಕಿದ್ದಾರೆ.
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 2 ಲಕ್ಷ ರೂ. ವರೆಗಿನ ರೈತರ ಸಾಲಮನ್ನಾ ಮಾಡಲಾಗುವುದು ಹಾಗೂ ಯುವಜನಾಂಗಕ್ಕೆ ಉದ್ಯೋಗ ನೀಡುವುದಾಗಿ ಘೋಷಣೆ ಮಾಡಲಾಗಿತ್ತು.
Advertisement