ಈ ಕುರಿತಂತೆ ನಿನ್ನೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ಬ್ಲಾಗ್ ನಲ್ಲಿ ವಿಸ್ತೃತವಾಗಿ ಬರೆದಿರುವ ಅವರು, ರಫೇಲ್ ಒಪ್ಪಂದ ಕುರಿತು ಜಂಟಿ ಸಂಸದೀಯ ಸಮಿತಿ ತನಿಖೆ ನಡೆಸುವುದಿಲ್ಲ. ರಫೇಲ್ ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕ್ಲೀನ್ ಚಿಟ್ ನೀಡಿದ ಬಳಿಕ ಮಹಾಲೇಖಪಾಲರ ಅಭಿಪ್ರಾಯವು ಪ್ರಾಧಾನ್ಯತೆ ಪಡೆದುಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.