ಸಿಬಿಐ ಒಳಜಗಳ: ಸಿಬಿಐ ಹೆಚ್ಚುವರಿ ನಿರ್ದೇಶಕರಾಗಿ ನಾಗೇಶ್ವರ್ ರಾವ್ ನೇಮಕ!

ಸಿಬಿಐ ಒಳಜಗಳ ಹಿನ್ನೆಲೆಯಲ್ಲಿ ಹಂಗಾಮಿ ನಿರ್ದೇಶಕರಾಗಿ ನೇಮಕಗೊಂಡಿದ್ದ ನಾಗೇಶ್ವರ್ ರಾವ್ ರನ್ನು ಇದೀಗ ಹೆಚ್ಚುವರಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.
ನಾಗೇಶ್ವರ್ ರಾವ್
ನಾಗೇಶ್ವರ್ ರಾವ್
Updated on
ನವದೆಹಲಿ: ಸಿಬಿಐ ಒಳಜಗಳ ಹಿನ್ನೆಲೆಯಲ್ಲಿ ಹಂಗಾಮಿ ನಿರ್ದೇಶಕರಾಗಿ ನೇಮಕಗೊಂಡಿದ್ದ ನಾಗೇಶ್ವರ್ ರಾವ್ ರನ್ನು ಇದೀಗ ಹೆಚ್ಚುವರಿ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. 
ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಹಾಗೂ ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಆಸ್ಥಾನರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ಆ ಬಳಿಕ ನಾಗೇಶ್ವರ್ ರಾವ್ ರನ್ನು ಹಂಗಾನಿ ನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ನೇಕಮ ಮಾಡಿತ್ತು. 
ನಾಗೇಶ್ವರ್ ರಾವ್ 1986ರ ಬ್ಯಾಚ್ ನ ಒಡಿಶಾ ಕೇಡರ್ ನ ಅಧಿಕಾರಿಯಾಗಿದ್ದು ಕೇಂದ್ರ ಸಂಪುಟ ಸಮಿತಿ ಅವರನ್ನು ಹೆಚ್ಚುವರಿ ನಿರ್ದೇಶಕರನ್ನಾಗಿ ನೇಮಕ ಮಾಡಿದೆ. 
ಭ್ರಷ್ಟಾಚಾರದ ಆರೋಪ ಹೊತ್ತುಕೊಂಡಿರುವ ಗುಜರಾತ್ ಕೇಡರ್ ನ ಅಧಿಕಾರಿ ರಾಕೇಶ್ ಆಸ್ಥಾನ ಅವರ ಎಲ್ಲಾ ಅಧಿಕಾರಗಳನ್ನು ಮೊಟುಕುಗೊಳಿಸಿ ಕಡ್ಡಾಯ ರಜೆ ಮೇಲೆ ಅವರನ್ನು ಕಳುಹಿಸಲಾಗಿತ್ತು. ಇನ್ನು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರಿಗೂ ಇದೇ ಸೂಚನೆ ಪಾಲಿಸುವಂತೆ ಸರ್ಕಾರ ಸೂಚಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com