ಜನಸಂದಣಿ ಹೆಚ್ಚಿದ್ದ ಮಾರುಕಟ್ಟೆ ಪ್ರದೇಶಗಳಿಗೂ ಸಹ ಬೀದಿಯಲ್ಲಿ ತಿರುಗುವ ಹಸುಗಳು ದಾಂಗುಡಿ ಇಡುತ್ತಿದ್ದು, ಇತ್ತೀಚೆಗಷ್ಟೇ ಗೂಳಿ ತಿವಿತಕ್ಕೆ ಓರ್ವ ಹಿರಿಯ ನಾಗರಿಕ ಮೃತಪಟ್ಟಿದ್ದರೆ ಹಲವರಿಗೆ ಗಾಯ ಉಂಟಾಗಿತ್ತು. ಸಿಕಂದ್ರಾ ಹಾಗೂ ತಾಜ್ ಮಹಲ್ ಬಳಿ ಗೂಳಿಗಳು ಪ್ರವಾಸಿಗರಿಗೂ ತಿವಿಯುತ್ತಿದ್ದು, ಸ್ಥಳೀಯರು ಆತಂಕಕ್ಕೊಳಗಾಗಿದ್ದು ಬೀದಿ ದನಗಳ ಸುತ್ತಾಟವನ್ನು ತಡೆಗಟ್ಟಲು ಸಂತಾನ ಹರಣ ಶಸ್ತ್ರಚಿಕಿತ್ಸೆ ಮಾಡಿಸಲು ಆಡಳಿತವನ್ನು ಒತ್ತಾಯಿಸುತ್ತಿದ್ದಾರೆ.