ಗುಜರಾತ್​​, ಮುಜಾಫರ್ ​​ನಗರ ಗಲಭೆಯ ಹಿಂದಿನ ಆರೋಪಿಗಳಿಗೂ ಶಿಕ್ಷೆಯಾಗಲಿ: ಕೇಜ್ರಿವಾಲ್

1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರಿಗೆ ದೆಹಲಿ ಕೋರ್ಟ್ ಜೀವಾವಧಿ ಶಿಕ್ಷೆ....
ಅರವಿಂದ್ ಕೇಜ್ರಿವಾಲ್
ಅರವಿಂದ್ ಕೇಜ್ರಿವಾಲ್
Updated on
ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರಿಗೆ ದೆಹಲಿ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಸ್ವಾಗತಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ಅದೇ ರೀತಿ ಗುಜರಾತ್​​, ಮುಜಾಫರ್ ​​ನಗರ ಗಲಭೆಯ ಹಿಂದಿನ ಆರೋಪಿಗಳಿಗೂ ಶಿಕ್ಷೆಯಾಗಬೇಕು ಎಂದು ಮಂಗಳವಾರ ಒತ್ತಾಯಿಸಿದ್ದಾರೆ.
ಇಂದು ಎಎನ್ ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ದೆಹಲಿ ಸಿಎಂ, ಸಜ್ಜನ್ ಕುಮಾರ್ ಗೆ ಶಿಕ್ಷೆಯಾಗಿರುವುದು ಪ್ರಜಾಪ್ರಭುತ್ವಕ್ಕೆ ಸಂದ ಜಯ. ಅಪರಾಧಿಗೆ  ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಸಿಖ್ ಹತ್ಯಾಕಾಂಡದ ಹಾಗೆಯೇ ಗುಜರಾತ್ ಗಲಭೆ ಮತ್ತು ಮುಜಾಫರ್ ​​ನಗರ ಗಲಭೆಯಲ್ಲಿ ಭಾಗಿಯಾಗಿರುವ ದೊಡ್ಡ ದೊಡ್ಡ ನಾಯಕರಿಗೂ ಜೀವಾವಧಿ ಶಿಕ್ಷೆಯಾಗಲಿ. ಇದಕ್ಕೆ ನ್ಯಾಯಾಂಗ ಮುಂದಾಗಬೇಕು ಎಂದಿದ್ದಾರೆ.
34 ವರ್ಷಗಳ ಬಳಿಕ ಸಿಖ್ ಸಮುದಾಯಕ್ಕೆ ನ್ಯಾಯ ಸಿಕ್ಕಿದೆ. ಈ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇವೆ. ಇದೇ ರೀತಿಯಲ್ಲಿ 2002 ರಲ್ಲಿ ಗುಜರಾತ್ ಗಲಭೆ, 2013 ರಲ್ಲಿ ಮಜಾಫರ್ ನಗರ ಗಲಭೆ ನಡೆಸಿದ ದೊಡ್ಡ ನಾಯಕರಿಗೂ ಶಿಕ್ಷೆಯಾಗಬೇಕು ಎಂದು ಕೇಜ್ರಿವಾಲ್ ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com