ರಫೇಲ್ ಕುರಿತು ಜಂಟಿ ಸಂಸದೀಯ ಸಮಿತಿಯಿಂದ ತನಿಖೆ ನಡೆಸದಿರುವುದು, ರೈತರ ಸಾಲ ಮನ್ನಾ ಮಾಡದಿರುವುದು, ನೋಟು ನಿಷೇಧದಂತಹ ತಪ್ಪುಗಳನ್ನು ಸರ್ಕಾರ ಮಾಡಿದೆ. ಜನರಿಗೆ ಸಾಕಷ್ಟು ಸುಳ್ಳುಗಳನ್ನೂ ಹೇಳಿದೆ. ರೈತರು, ಸಣ್ಣ ವ್ಯಾಪಾರಿಗಳನ್ನು ಲೋಟಿ ಮಾಡಿದೆ. ನೋಟು ನಿಷೇಧದ ಮೂಲಕ ಇಡೀ ವಿಶ್ವದಲ್ಲಿಯೇ ಅತೀ ದೊಡ್ಡ ಹಗರಣವನ್ನು ಸರ್ಕಾರ ಮಾಡಿದೆ.