ರಾಹುಲ್ ಗಾಂಧಿಗೆ ತಿರುಗೇಟು ನೀಡುವುದಕ್ಕೆ ಕರ್ನಾಟಕದ ಸಮ್ಮಿಶ್ರ ಸರ್ಕಾರ ರೈತರ ಸಾಲ ಮನ್ನಾ ಮಾಡದೇ ಇರುವುದನ್ನು ಉಲ್ಲೇಖಿಸಿರುವ ಬಿಜೆಪಿ ನಾಯಕರು, ಪತ್ರಿಕಾ ಹೇಳಿಕೆ ಹಾಗೂ ಟ್ವೀಟ್ ಗಳಿಂದ ಏನೂ ಪ್ರಯೋಜನವಾಗುವುದಿಲ್ಲ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಗಿತ್ತು. ಆದರೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ ಸಹ ರೈತರ ಸಾಲ ಮನ್ನಾ ಮಾಡಿಲ್ಲ, ಕ್ರಮೇಣ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ ಗಢದ ಜನತೆಯೂ ನಿಮ್ಮ ಸುಳ್ಳು ಭರವಸೆಗಳನ್ನು ಅರಿಯಲಿದ್ದಾರೆ ಎಂದು ಬಿಜೆಪಿ ಹೇಳಿದೆ.