ಬುಲಂದ್ ಶಹರ್‌ ಹಿಂಸಾಚಾರ ರಾಜಕೀಯ ಪಿತೂರಿ: ಸಿಎಂ ಯೋಗಿ ಆದಿತ್ಯನಾಥ್

ಪೊಲೀಸ್ ಅಧಿಕಾರಿಯನ್ನು ಬಲಿ ಪಡೆದ ಬುಲಂದ್ ಶಹರ್‌ ಹಿಂಸಾಚಾರ ರಾಜಕೀಯ ನೆಲೆ ಕಳೆದುಕೊಂಡವರು ನಡೆಸಿದ ರಾಜಕೀಯ....
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಲಖನೌ: ಪೊಲೀಸ್ ಅಧಿಕಾರಿಯನ್ನು ಬಲಿ ಪಡೆದ ಬುಲಂದ್ ಶಹರ್‌ ಹಿಂಸಾಚಾರ ರಾಜಕೀಯ ನೆಲೆ ಕಳೆದುಕೊಂಡವರು ನಡೆಸಿದ ರಾಜಕೀಯ ಪಿತೂರಿ ಎಂದು 'ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಬುಧವಾರ ಹೇಳಿದ್ದಾರೆ.
ಪ್ರತಿಪಕ್ಷಗಳ ತೀವ್ರ ಗದ್ದಲದ ಹಿನ್ನೆಲೆಯಲ್ಲಿ ವಿಧಾನಸಭೆ ಕಲಾಪವನ್ನು ನಾಳೆಗೆ ಮುಂದೂಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯೋಗಿ, ಗೋ ಹತ್ಯೆ ವಿಫಲವಾದ ನಂತರ ಅರಾಜಕತೆಯನ್ನು ಸೃಷ್ಟಿಸಲು ಬಯಸುವವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ, ರೈತರ ಸಮಸ್ಯೆ ತೀವ್ರವಾಗಿ ಬಿಗಡಾಯಿಸಿದೆ, ರಾಜ್ಯ ಸರಕಾರ ನಿಷ್ಕ್ರಿಯವಾಗಿದೆ ಎಂದು ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗಿ ಗದ್ದಲ ಎಬ್ಬಿಸಿದರು.
ಪ್ರತಿಪಕ್ಷಗಳ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಯೋಗಿ, ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುತ್ತಿದೆ. ಬುಲಂದ್ ಶಹರ್ ಪ್ರಕರಣ ರಾಜಕೀಯ ಪಿತೂರಿ ಎಂಬುದು ಸ್ಪಷ್ಟವಾಗಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com