ಸಿಎಂ ಆದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಕಮಲ್ ನಾಥ್, ವಲಸೆ ನೌಕರರ ಕುರಿತು ನೀಡಿದ ಹೇಳಿಕೆ ಬಿಹಾರ ಹಾಗೂ ಉತ್ತರ ಪ್ರದೇಶದ ಜನತೆ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ ಎಂಬ ಅಸಮಾಧಾನ ವ್ಯಕ್ತವಾಗಿತ್ತು. ಕಮಲ್ ನಾಥ್ ಹೇಳಿಕೆ ಹಿನ್ನೆಲೆಯಲ್ಲಿ ಸಾಮಾಜಿಕ ಕಾರ್ಯಕರ್ತ ತಮನ್ನಾ ಹಶ್ಮಿ ಬಿಹಾರದ ಕೋರ್ಟ್ ನಲ್ಲಿ ಐಪಿಸಿ ಸೆಕ್ಷನ್ 153 (ಗಲಭೆ ಉಂಟು ಮಾಡಲು ಉದ್ದೇಶ ಪೂರ್ವಕ ಪ್ರಚೋದನೆ) 504 (ಶಾಂತಿಯನ್ನು ಕದಡಲು ಉದ್ದೇಶಪೂರ್ವಕವಾಗಿ ಪ್ರಚೋದನೆ ಉದ್ದೇಶ ದೂರು ದಾಖಲಿಸಿದ್ದಾರೆ.