ಮಣಿಪುರದ ಮುಖ್ಯಮಂತ್ರಿ ಕೇಂದ್ರ ಸರ್ಕಾರದ ಹಾಗೂ ಹಿಂದುತ್ವದ ಸೂತ್ರದ ಗೊಂಬೆ ಎಂದು ಟೀಕಿಸಿದ್ದ ವಿಡಿಯೋವನ್ನು ಕಿಶೋರ್ ಚಂದ್ರ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದರು. ಝಾನ್ಸಿ ರಾಣಿಯ ಜಯಂತಿ ಆಚರಿಸುವ ರಾಜ್ಯ ಸರ್ಕಾರದ ನಡೆಯಿಂದ ಆಘಾತವಾಗಿದೆ. ದೇಶದ ಏಕತೆಗಾಗಿನ ಕೊಡುಗೆಯನ್ನು ಗುರುತಿಸಿ ಝಾನ್ಸಿ ರಾಣಿಯ ಜಯಂತಿ ಆಚರಿಸುತ್ತಿರುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಆದರೆ ಆಕೆ ಮಣಿಪುರಕ್ಕಾಗಿ ಏನನ್ನೂ ಮಾಡಿಲ್ಲ. ಕೇವಲ ಕೇಂದ್ರ ಸರ್ಕಾರ ಹೇಳಿಕೆ ಎಂಬ ಮಾತ್ರಕ್ಕೆ ನೀವು ಜಯಂತಿ ಆಚರಿಸುತ್ತಿದ್ದೀರಿ ಎಂದು ವಿಡಿಯೋದಲ್ಲಿ ಕಿಶೋರ್ ಚಂದ್ರ ಹೇಳಿದ್ದರು ಎನ್ನಲಾಗಿದೆ.