ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುಮಿತ್ ನನ್ನು ರಕ್ಷಿಸಲು ಭಾಗ್ಯಶ್ರೀ ಸಹಾಯಕ್ಕಾಗಿ ಅಂಗಲಾಚಿ ಬೇಡುತ್ತಿದ್ದರು. ಅಲ್ಲಿ ನೆರೆದಿದ್ದ ಜನರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡುವುದರಲ್ಲಿ ನಿರತರಾಗಿದ್ದರು. ಅಷ್ಟರಲ್ಲಿ ಆಟೋ ಚಾಲಕನೊಬ್ಬ ಆಕೆಯ ಸಹಾಯಕ್ಕೆ ಬಂದಿದ್ದು ಕೂಡಲೇ ಸುಮಿತ್ ನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಯಿತು. ಆದರೆ ತೀವ್ರ ರಕ್ತಸ್ರಾವವಾಗಿದ್ದರಿಂದ ಸುಮಿತ್ ಮೃತಪಟ್ಟಿದ್ದಾರೆ.