ಕಠ್ಮಂಡು: ಪ್ರವಾಸಕ್ಕೆಂದು ತೆರಳಿದ್ದ ಸಂದರ್ಭದಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ 400 ಮೀಟರ್ಗಳಷ್ಟು ಆಳದ ಕಂದಕಕ್ಕೆ ಬಿದ್ದ ಪರಿಣಾಮ ಶಿಕ್ಷಕರು ಸೇರಿದಂತೆ 16 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಭೀಕರ ಘಟನೆ ನೇಪಾಳದಲ್ಲಿ ಸಂಭವಿಸಿದೆ.
ಶೈಕ್ಷಣಿಕ ಪ್ರವಾಸಕ್ಕಾಗಿ ತೆರಳಿದ್ದರು. ಈ ವೇಳೆ ದಾಂಗ್ ಜಿಲ್ಲೆಯ ತುಲ್ಸಿಪುರದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 16 ಮಂದಿ ಸಾವನ್ನಪ್ಪಿದ್ದು 12 ಮಂದಿಗೆ ಗಂಭೀರ ಗಾಯಗಳಾಗಿವೆ.
ಘೋರಾಹಿಯಲ್ಲಿನ ಕೃಷ್ಣಾಸೆನ್ ಟೆಕ್ನಿಕಲ್ ಸ್ಕೂಲ್ ನಿಂದ 31 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರವಾಸಕ್ಕೆ ತೆರಳಿದ್ದರು. ಒಂದು ದಿನದ ಪ್ರವಾಸಕ್ಕಾಗಿ ಅವರೆಲ್ಲರೂ ತೆರಳಿದ್ದರು ಎಂದು ತಿಳಿದುಬಂದಿದೆ.