1984ರ ಸಿಖ್ ದಂಗೆ: ಶರಣಾಗಲು ಹೆಚ್ಚಿನ ಸಮಯ ಕೋರಿದ್ದ ಸಜ್ಜನ್ ಕುಮಾರ್ ಅರ್ಜಿ ವಜಾ

1984ರ ಸಿಖ್ ದಂಗೆಯಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್ ಕುಮಾರ್, ತಾವು ಶರಣಾಗಲು ಹೆಚ್ಚಿನ ಸಮಯ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ...
ಸಜ್ಜನ್ ಕುಮಾರ್
ಸಜ್ಜನ್ ಕುಮಾರ್
ನವದೆಹಲಿ: 1984ರ ಸಿಖ್ ದಂಗೆಯಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್ ಕುಮಾರ್, ತಾವು ಶರಣಾಗಲು ಹೆಚ್ಚಿನ ಸಮಯ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಶರಣಾಗಲು ತಿಂಗಳಿಗಿಂತಲೂ ಹೆಚ್ಚಿನ ಸಮಯವಕಾಶ ಕೋರಿ ದೆಹಲಿ ಹೈಕೋರ್ಟ್ ನಲ್ಲಿ ನಿನ್ನೆ ಸಜ್ಜನ್ ಕುಮಾರ್ ಅಪೀಲು ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ ವಜಾಗೊಳಿಸಿದೆ.
1984ರ ಸಿಖ್ ದಂಗೆ ಪ್ರಕರಣ ಸಂಬಂಧ ಸಜ್ಜನ್ ಕುಮಾರ್ ಸಿಂಗ್ ಗೆ ಜೀವಾವಧಿ ಶಿಕ್ಷೆ ವಿಧಿಸಿ, ಡಿಸೆಂಬರ್  31 ರೊಳಗೆ ಶರಣಾಗುವಂತೆ ನ್ಯಾಯಾಲಯ ಸೂಚಿಸಿತ್ತು,

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com