ವಾಯುಸೇನಾ ಮುಖ್ಯಸ್ಥರನ್ನು ಟೀಕಿಸಿದ ವೀರಪ್ಪ ಮೊಯ್ಲಿ ವಿರುದ್ದ ಬಿಜೆಪಿ ತೀವ್ರ ಕಿಡಿ

ಭಾರತೀಯ ವಾಯುಸೇನೆ ಮುಖ್ಯಸ್ಥ ಬಿ.ಎಸ್.ಧನೋವಾ ಅವರನ್ನು ಟೀಕಿಸಿದ್ದ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ವಿರುದ್ಧ ಬಿಜೆಪಿ ಶುಕ್ರವಾರ ತೀವ್ರವಾಗಿ ಕಿರಿಕಾರಿದೆ...
ಬಿಜೆಪಿ ಮುಖಂಡ ಪ್ರಕಾಶ್ ಜವಡೇಕರ್
ಬಿಜೆಪಿ ಮುಖಂಡ ಪ್ರಕಾಶ್ ಜವಡೇಕರ್
Updated on
ನವದೆಹಲಿ: ಭಾರತೀಯ ವಾಯುಸೇನೆ ಮುಖ್ಯಸ್ಥ ಬಿ.ಎಸ್.ಧನೋವಾ ಅವರನ್ನು ಟೀಕಿಸಿದ್ದ ಕಾಂಗ್ರೆಸ್ ಹಿರಿಯ ನಾಯಕ ವೀರಪ್ಪ ಮೊಯ್ಲಿ ವಿರುದ್ಧ ಬಿಜೆಪಿ ಶುಕ್ರವಾರ ತೀವ್ರವಾಗಿ ಕಿರಿಕಾರಿದೆ. 
ಮೊಯ್ಲಿ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಮುಖಂಡ ಪ್ರಕಾಶ್ ಜವಡೇಕರ್ ಅವರು, ಮೊಯ್ಲಿಯವರ ಹೇಳಿಕೆಯಿಂದ ಕಾಂಗ್ರೆಸ್ ಬಣ್ಣ ಬಯಲಾಗಿದೆ ಎಂದು ಹೇಳಿದ್ದಾರೆ. 
ಕಾಂಗ್ರೆಸ್ ಹಿರಿಯ ಮುಖಂಡರಾಗಿರುವ ವೀರಪ್ಪ ಮೊಯ್ಲಿಯವರು ವಾಯುಸೇನಾ ಮುಖ್ಯಸ್ಥರ ಹೆಸರು ಪ್ರಸ್ತಾಪಿಸಿ ಹೇಳಿಕೆ ನೀಡಿದ್ದು, ಅವರ ಹೇಳಿಕೆಯಿಂದ ಕಾಂಗ್ರೆಸ್ ಮುಖ ಸಂಪೂರ್ಣ ಬಯಲಾಗಿದೆ. ವಿವಿಐಪಿ ಚಾಪರ್ ಹಗರಣದ ತನಿಖೆ ಚುರುಕುಗೊಂಡಿರುವುದಕ್ಕೆ ಕಾಂಗ್ರೆಸ್ ಗಲಿಬಿಲಿಗೊಂಡಿದೆ ಎಂದು ತಿಳಿಸಿದ್ದಾರೆ. 
ಈ ಹಿಂದೆ ಹೇಳಿಕೆ ನೀಡಿದ್ದ ಮೊಯ್ಲಿಯವರು, ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿದಂತೆ ವಾಯುಸೇನೆ ಮುಖ್ಯಸ್ಥರು ಸುಳ್ಳು ಹೇಳುತ್ತಿದ್ದಾರೆ. ವಾಯುಸೇನೆಯಲ್ಲಿ ಎಲ್ಲವೂ ಸರಿಯಾಗಿಲ್ಲ. ಅಲ್ಲದೆ, ರಫೇಲ್ ಒಪ್ಪಂದ ಮಾಡಿಕೊಂಡಿದ್ದ ಪ್ರಧಾನಿ ಮೋದಿ ಕ್ಷಮೆಯಾಚಿಸಬೇಕೆಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com