ನವದೆಹಲಿ: ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಫ್ಟರ್ ಹಗರಣದ ಮಧ್ಯವರ್ತಿ ಕ್ರಿಶ್ಚಿಯನ್ ಮೈಕಲ್ ನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ.
ಡಿ.22 ರಂದು ದೆಹಲಿ ಕೋರ್ಟ್ ಗೆ ಆರೋಪಿಯನ್ನು ಹಾಜರುಪಡಿಸಿದ ಬಳಿಕ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದೆ. ಕೋರ್ಟ್ ಗೆ ಹಾಜರುಪಡಿಸಿದಾಗ ಕ್ರಿಶ್ಚಿಯನ್ ಮೈಕಲ್ ನ್ನು ವಿಚಾರಣೆಗಾಗಿ 15 ದಿನಗಳ ಕಾಲ ವಶಕ್ಕೆ ನೀಡಬೇಕೆಂದು ಜಾರಿ ನಿರ್ದೇಶನಾಲಯ ಮನವಿ ಮಾಡಿತ್ತು.
ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಾಣೆ ನಡೆಸಲು ಜಾರಿ ನಿರ್ದೇಶನಾಲಯ ಕ್ರಿಶ್ಚಿಯನ್ ಮೈಕಲ್ ನ್ನು ವಶಕ್ಕೆ ಕೇಳಿತ್ತು. ಕ್ರಿಶ್ಚಿಯನ್ ಮೈಕಲ್ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿದ್ದ ದೆಹಲಿ ಕೋರ್ಟ್, ಡಿ.28 ವರೆಗೆ ಆತನನ್ನು ನ್ಯಾಯಾಂಗ ಬಂಧನಕ್ಕೆ ನೀಡಿತ್ತು.