ಭುವನೇಶ್ವರ್ : ಪ್ರಯಾಣಿಕರೊಬ್ಬರಿಗೆ ತುರ್ತು ಚಿಕಿತ್ಸೆ ಕಾರಣದಿಂದಾಗಿ ಕೊಲ್ಕತ್ತಾದಿಂದ ಬೆಂಗಳೂರಿಗೆ ಹೊರಟಿದ್ದ ವಿಮಾನವೊಂದು ಇಲ್ಲಿನ ಬಿಜಿ ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.
32 ವರ್ಷದ ವ್ಯಕ್ತಿಯೊಬ್ಬರಿಗೆ ತುರ್ತು ಚಿಕಿತ್ಸೆಯ ಅಗತ್ಯ ಇದುದ್ದರಿಂದ ಇಂಡಿಗೊ ವಿಮಾನ (822 ) ಬೆಳಗ್ಗೆ 11-15 ರ ಸುಮಾರಿನಲ್ಲಿ ಲ್ಯಾಂಡ್ ಆಗಿದ್ದು, ವಿಮಾನ ನಿಲ್ದಾಣದ ಅಧಿಕಾರಿಗಳು ಹಾಗೂ ವೈದ್ಯರು ಎಲ್ಲಾ ರೀತಿಯ ನೆರವು ನೀಡಿದ್ದಾರೆ.
ಆತನ ಹೃದಯ ಬಡಿತ ನಿಂತಿದ್ದು, ದೇಹ ತಣ್ಣಗಾಗಿದೆ. ಆತ ಯಾವುದೇ ರೀತಿಯಲ್ಲೂ ಪ್ರತಿಕ್ರಿಯಿಸುತ್ತಿಲ್ಲ ಎಂದು ಬಿಪಿಐಎ ನಿರ್ದೇಶಕ ಸುರೇಶ್ ಚಂದ್ರ ಹೊಟಾ ಹೇಳಿದ್ದಾರೆ.
ನಂತರ ಆ ರೋಗಿಯನ್ನು ಕ್ಯಾಪಿಟಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತಾದರೂ ಆತ ಬದುಕುಳಿಯಲಿಲ್ಲ. ಹೃದಯ ಸಂಬಂಧಿತ ಸಮಸ್ಯೆಯಿಂದ ಬಳಲುತ್ತಿದ್ದ ಆತ ತನ್ನ ಸಂಬಂಧಿಕರೊಬ್ಬರೊಂದಿಗೆ ಬೆಂಗಳೂರಿಗೆ ಬರುತ್ತಿದ್ದ ಎನ್ನಲಾಗಿದೆ.
Advertisement