ಕಾಂಗ್ರೆಸ್ ಗಿಂತ ಬಿಜೆಪಿ ಅತಿ ಹೆಚ್ಚು ಅಪಾಯಕಾರಿ: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಭರವಸೆ ನೀಡಿದ್ದರಿಂದ ಟಿಡಿಪಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ...
ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು
ಅಮರಾವತಿ: ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಭರವಸೆ ನೀಡಿದ್ದರಿಂದ ಟಿಡಿಪಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಸೆಪ್ಟಂಬರ್ ನಲ್ಲಿ ಕರ್ನೂಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಭರವಸೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. 
ಬಿಜೆಪಿ ಕಾಂಗ್ರೆಸ್ ಗಿಂತ ಹೆಚ್ಚು ಅಪಾಯಕಾರಿ, ಕಾಂಗ್ರೆಸ್ ನಿಂದ ರಾಜ್ಯಕ್ಕೆ ಹೆಚ್ಚು ನಷ್ಟವಾಗಿದೆ, ಆದರೂ ಕಾಂಗ್ರೆಸ್ ಆಂದ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಬೆಂಬಲ ನೀಡುತ್ತಿದ್ದಾರೆ, ಆದರೆ ಬಿಜೆಪಿ ನುಡಿದಂತೆ ನಡೆಯಲಿಲ್ಲ, ಆಂಧ್ರಪ್ರದೇಶ ಮರು ಸಂಘಟನಾ ಕಾಯಿದೆಯನ್ನು ಬಿಜೆಪಿ ಅನುಷ್ಠಾನಕ್ಕೆ ತರಲಿಲ್ಲ ಎಂದು ಆರೋಪಿಸಿದ್ದಾರೆ.
ಚಂದ್ರ ಬಾಬು ನಾಯ್ಡು ಶನಿವಾರದಿಂದ  ಬಿಜೆಪಿ ಸರ್ಕಾರದ ವಿರುದ್ಧ ಧರ್ಮ ಪೋರಾಟ ಧೀಕ್ಷಾ ಪ್ರತಿಭಟನೆ ಕೈಗೊಂಡಿದ್ದು, ಸಾರ್ವಜನಿಕ ರ್ಯಾಲಿ ಉದ್ದೇಶಿಸಿ ಮಾತನಾಡಿದರು. 
ಬಾಲಾಜಿ ಮುಂದೆ ನಿಂತ ಮೋದಿ ದೆಹಲಿಗಿಂತ ಆಂದ್ರಪ್ರದೇಶ ಬೌಗೇಳಿಕವಾಗಿ ವಿಸ್ತಾರವಾಗಿದೆ , ಹೀಗಾಗಿ ಬಂದೇಲ್ ಖಂಡಕ್ಕೆ ನೀಡಿದಂತೆ ವಿಶೇಷ ಪ್ಯಾಕೇಜ್ ನೀಡುವುದಾಗಿ ಭರವಸೆ ನೀಡಿದ್ದರು, ಆದರೆ ಅದನ್ನು ಮೋದಿ ಈಡೇರಿಸಲಿಲ್ಲ ಎಂದು ದೂರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com