ಮಾಜಿ ಕೇಂದ್ರ ಸಚಿವರೂ ಆಗಿದ್ದ ನಿಶಾದ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. "ಕ್ಯಾಪ್ಟನ್ ಜೈ ನಾರಾಯಣ್ ಪ್ರಸಾದ್ ನಿಶಾದ್ ಅವರ ನಿಧನದಿಂದ ದುಃಖಿತನಾಗಿದ್ದೇನೆ.ಅವರು ನಮ್ಮ ದೇಶಕ್ಕೆ ಬಹಳ ಶ್ರದ್ದೆಯಿಂದ ಸೇವೆ ಸಲ್ಲಿಸಿದ್ದರು. ಬಿಹಾರದ ಪ್ರಗತಿಗೆ ಕ್ಯಾಪ್ಟನ್ ನಿಶಾದ್ ಅವರ ಪ್ರಯತ್ನಗಳು ಗಮನಾರ್ಹವಾಗಿವೆ. ಬಡವರನ್ನು ಉದ್ದರಿಸುವ ಅವರ ಕಾರ್ಯಗಳು ಎಂದಿಗೂ ಸ್ಮರಣೀಯ.ಅವರ ಕುಟುಂಬ ಮತ್ತು ಆತ್ಮೀಯರಿಗೆ ಅವರ ಸಾವನ್ನು ಭರಿಸುವ ಶಕ್ತಿ ಒದಗಲಿ" ಮೋದಿ ಟ್ವೀಟ್ ಮಾಡಿದ್ದಾರೆ.