ಕಾಂಗ್ರೆಸ್ ಹಾಗೂ ಬಿಜೆಪಿಯೇತರ ರಂಗ ರಚನೆಯ ಯೋಜನೆ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೆಸಿಆರ್, ‘ಇದು ಒಂದೇ ಭೇಟಿಯಲ್ಲಿ ಮಾತುಕತೆ ನಡೆಸಿ ನಿರ್ಧಾರ ತೆಗೆದುಕೊಳ್ಳುವಂತಹ ಪ್ರಕ್ರಿಯೆ ಅಲ್ಲ. ಎಲ್ಲರ ಜತೆ ಮಾತುಕತೆ ನಡೆಸಿ ಶೀಘ್ರದಲ್ಲೇ ಈ ರಂಗ ರಚನೆಯ ಯೋಜನೆಯ ರೂಪುರೇಷೆ ರೂಪಿಸಲಾಗುತ್ತದೆ. ಆದಷ್ಟು ಬೇಗ ಈ ಬಗ್ಗೆ ಸಿಹಿ ಸುದ್ದಿ ನೀಡುತ್ತೇವೆ’ ಎಂದರು.