ವಿವಿಐಪಿ ಕ್ಯಾಪ್ಟರ್ ಹಗರಣ: ವಾಯುಪಡೆ ಮಾಜಿ ಮುಖ್ಯಸ್ಥ ತ್ಯಾಗಿ ವಿದೇಶ ಪ್ರವಾಸಕ್ಕೆ ಕೋರ್ಟ್ ಅಸ್ತು

ವಿವಿಐಪಿ ಹೆಲಿಕಾಪ್ಟರ್ ಹಗರಣದ ಆರೋಪಿಗಳಾದ ವಾಯುಪಡೆ ಮಾಜಿ ಮುಖ್ಯಸ್ಥ ಏರ್ ಚೀಫ್ ಮಾರ್ಷೆಲ್ ಎಸ್.ಪಿ.ತ್ಯಾಗಿ....
ಎಸ್ ಪಿ ತ್ಯಾಗಿ
ಎಸ್ ಪಿ ತ್ಯಾಗಿ
ನವದೆಹಲಿ: ವಿವಿಐಪಿ ಹೆಲಿಕಾಪ್ಟರ್ ಹಗರಣದ ಆರೋಪಿಗಳಾದ ವಾಯುಪಡೆ ಮಾಜಿ ಮುಖ್ಯಸ್ಥ ಏರ್ ಚೀಫ್ ಮಾರ್ಷೆಲ್ ಎಸ್.ಪಿ.ತ್ಯಾಗಿ ಹಾಗೂ ಅವರ ಸಹೋದರ ಸಂಬಂಧಿ ಸಂಜೀವ್ ತ್ಯಾಗಿ ಅವರ ವಿದೇಶ ಪ್ರವಾಸಕ್ಕೆ ದೆಹಲಿ ಕೋರ್ಟ್ ಸೋಮವಾರ ಅನುಮತಿ ನೀಡಿದೆ.
2019ರ ಮಾರ್ಚ್ ನಲ್ಲಿ ಅಮೆರಿಕಕ್ಕೆ ತೆರಳಲು ಅನುಮತಿ ಕೋರಿ ಎಸ್ ಪಿ ತ್ಯಾಗಿ ಹಾಗೂ ಸಂಜೀವ್ ತ್ಯಾಗಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಅರವಿಂದ್ ಕುಮಾರ್ ಅವರು, ಆರೋಪಿಗಳ ವಿದೇಶ ಪ್ರವಾಸಕ್ಕೆ ಅನುಮತಿ ನೀಡಿದ್ದಾರೆ.
ಕ್ಯಾಪ್ಟರ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸೆಪ್ಟೆಂಬರ್ 1, 2017ರಲ್ಲಿ ಎಸ್ ಪಿ ತ್ಯಾಗಿ, ಬ್ರಿಟಿಷ್ ಪ್ರಜೆ, ಮಧ್ಯವರ್ತಿ ಕ್ರಿಶ್ಚಿಯನ್ ಮೈಕೆಲ್ ಹಾಗೂ ಇತರರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ.
ತ್ಯಾಗಿ ಅವರು ಅಗಸ್ಟಾ ವೆಸ್ಟ್​ಲ್ಯಾಂಡನ್ನು ಹರಾಜುದಾರರ ಪಟ್ಟಿಗೆ  ಸೇರ್ಪಡೆ ಮಾಡಲು ಅನುಕೂಲವಾಗುವಂತೆ, ಹೆಲಿಕಾಪ್ಟರ್​ನ ಹಾರಾಟದ ಮಿತಿಯನ್ನು 6,000 ಮೀ.ನಿಂದ 4500 ಮೀ.ಗಳಿಗೆ (15,000 ಅಡಿಗಳು) ಇಳಿಸಿದರು. ಇದಕ್ಕೆ ಪ್ರತಿಯಾಗಿ ತ್ಯಾಗಿ  ಭಾರಿ ಪ್ರಮಾಣದ ಕಿಕ್ ಬ್ಯಾಕ್ ಪಡೆದಿದ್ದರು ಎಂಬ ಆರೋಪವನ್ನು ಅವರ ವಿರುದ್ಧ ಮಾಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com