ಈ ಮಧ್ಯೆ ಭಾನುವಾರದ ಘಟನೆ ಮತ್ತೆ ರಾಜ್ಯ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಮಾತಿನ ಸಮರಕ್ಕೆ ಕಾರಣವಾಗಿದೆ. 'ಮಾನಿತಿ' ಸಂಘಟನೆಯ ಮಹಿಳೆಯರ ದೇಗುಲ ಪ್ರವೇಶ ಪೂರ್ವಯೋಜಿತವಾಗಿದ್ದು, ಇದಕ್ಕೆ ಆಡಳಿತಾರೂಢ ಸಿಪಿಐ-ಎಂ ನೇತೃತ್ವದ ಎಲ್ ಡಿಎಫ್ ಸರ್ಕಾರದ ಹಸ್ತಕ್ಷೇಪವಿದೆ ಎಂದು ಬಿಜೆಪಿ ಆರೋಪಿಸಿದೆ. ಇದಕ್ಕೆ ತಿರುಗೇಟು ನೀಡಿರುವ ಪಿಣರಾಯಿ ವಿಜಯನ್ ಸರ್ಕಾರ, ನ್ಯಾಯಾಲಯದ ಆದೇಶ ಪಾಲನೆ ಮಾಡುತ್ತಿರುವುದಾಗಿ ಸಮರ್ಥಿಸಿಕೊಂಡಿದೆ. ''ಹೈಕೋರ್ಟ್ ರಚಿಸಿರುವ ತ್ರಿಸದಸ್ಯ ಸಮಿತಿಯು ಈ ಪ್ರಕರಣವನ್ನು ಪರಿಶೀಲಿಸಲಿದ್ದು ಸೂಕ್ತ ನಿರ್ಧಾರ ಕೈಗೊಳ್ಳಲಿದೆ. ಸಮಿತಿಯ ತೀರ್ಮಾನದಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ,'' ಎಂದು ಸಚಿವ ಕಡಕಂಪಲ್ಲಿ ಸುರೇಂದ್ರನ್ ಹೇಳಿದ್ದಾರೆ.