ಉತ್ತರ ಪ್ರದೇಶದ ಧಾರ್ಮಿಕ ದತ್ತಿ ಇಲಾಖೆ ಸಚಿವ ಲಕ್ಷ್ಮಿ ನಾರಾಯಣ್ ಚೌಧರಿ ಹನುಮಂತನನ್ನು ಜಾಟ್ ಸಮುದಾಯಕ್ಕೆ ಸೇರಿದವನೆಂದು ಹೇಳಿದ್ದರು. ಇದಕ್ಕೂ ಮುನ್ನ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹನುಮಂತ ದಲಿತ ಸಮುದಾಯಕ್ಕೆ ಸೇರಿದ ವ್ಯಕ್ತಿ ಎಂದು ಹೇಳಿದ್ದರು, ಈ ಮಧ್ಯೆ ಬಿಜೆಪಿ ಎಂಎಲ್ ಸಿ ನವಾಬ್ ಹನುಮಂತ ಮುಸ್ಲಿಂ ಎಂದಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂತ ಶಂಕರಾಚಾರ್ಯ ಅಧೋಕ್ಷಜಾನಂದ ದೇವ್ ತೀರ್ಥ, ಒಂದೆಡೆ ಬಿಜೆಪಿ ಕಾಲ ಕಾಲಕ್ಕೆ ರಾಮ ಮಂದಿರ ವಿಷಯವನ್ನು ಮುನ್ನೆಲೆಗೆ ತರುತ್ತದೆ, ಮತ್ತೊಂದೆಡೆ ಅದರ ನಾಯಕರು ಹಿಂದೂ ದೇವತೆಗಳ ಬಗ್ಗೆ ಅಸಂಬದ್ಧ ಹೇಳಿಕೆ ನೀಡುತ್ತಾರೆ ಈ ಬಗ್ಗೆ ಬಿಜೆಪಿ ಪಕ್ಷ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕೆಂದು ಅಗ್ರಹಿಸಿದ್ದಾರೆ.