ಮಧ್ಯಪ್ರದೇಶದಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದ್ದು ಇದರ ಬೆನ್ನಲ್ಲೇ ಕಾಂಗ್ರೆಸ್ ಸಚಿವರೊಬ್ಬರು ಟೋಲ್ ಹಣ ಕಟ್ಟುವುದಿಲ್ಲ ಎಂದು ಟೋಲ್ ಬೂತ್ ಬಳಿ ಗಲಾಟೆ ಮಾಡಿ ಸುದ್ದಿಯಾಗಿದ್ದಾರೆ.
ಮಧ್ಯಪ್ರದೇಶದ ಪಿತಾಂಪುರ್ ಟೋಲ್ ಬೂತ್ ಬಳಿ ಸಿಬ್ಬಂದಿ ಸಚಿವರಿದ್ದ ಕಾರನ್ನು ತಡೆದಿದ್ದಾರೆ. ಈ ವೇಳೆ ಆಕ್ರೋಶಗೊಂಡ ಸಚಿವರು ಟೋಲ್ ಬೂತ್ ಸಿಬ್ಬಂದಿ ಮೇಲೆ ಗೂಂಡಾಗಿರಿ ಮಾಡಿದ್ದು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ವೈರಲ್ ಆಗಿದೆ.