" ರಕ್ಷಣಾ ಕಾರ್ಯಾಚರಣೆಗೆ ಸಾಧನಗಳ ಕೊರತೆಯಾಗಿದ್ದು ಒಂದೆಡೆ ಗಣಿ ಕಾರ್ಮಿಕರು ಆಮ್ಲಜನಕವಿಲ್ಲದೇ ಪರದಾಡುತ್ತಿದ್ದರೆ, ಪ್ರಧಾನಿ ನರೇಂದ್ರ ಮೋದಿ ಫೋಟೊಗಳಿಗೆ ಪೋಸ್ ಕೊಡುತ್ತಿದ್ದಾರೆ" ಎಂದು ಟ್ವೀಟ್ ಮಾಡಿದ್ದಾರೆ. ಕೇಂದ್ರ ಸರ್ಕಾರ ಮೇಘಾಲಯದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಿರುವ ಸಾಧನಗಳನ್ನು ಒದಗಿಸುವುದರತ್ತ ಗಮನ ಹರಿಸುತ್ತಿಲ್ಲ. " ಪ್ರಧಾನಮಂತ್ರಿಗಳೇ ದಯವಿಟ್ಟು ಗಣಿ ನೌಕರರನ್ನು ರಕ್ಷಿಸಿ ಎಂದು ಟ್ವೀಟ್ ಮಾಡುವ ಮೂಲಕ ರಾಹುಲ್ ಗಾಂಧಿ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಿದ್ದಾರೆ.