ರಾಜಕೀಯ ಲಾಭಕ್ಕಾಗಿ ಶಬರಿಮಲೆಗೆ ಭೇಟಿ ನೀಡುವವರಿಗೆ ರಕ್ಷಣೆ ಇಲ್ಲ: ಪೊಲೀಸರು

ರಾಜಕೀಯ ಲಾಭಕ್ಕಾಗಿ ಅಥವಾ ಪ್ರಚಾರಕ್ಕಾಗಿ ಶಬರಿಮಲೆಗೆ ಭೇಟಿ ನೀಡುವ ಮಹಿಳಾ ಕಾರ್ಯಕರ್ತರಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಶಬರಿಮಲೆ: ರಾಜಕೀಯ ಲಾಭಕ್ಕಾಗಿ ಅಥವಾ ಪ್ರಚಾರಕ್ಕಾಗಿ ಶಬರಿಮಲೆಗೆ ಭೇಟಿ ನೀಡುವ ಮಹಿಳಾ ಕಾರ್ಯಕರ್ತರಿಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಶಬರಿಮಲೆಯಲ್ಲಿ ನಿಯೋಜನೆಗೊಂಡಿರುವ ಪೊಲೀಸ್ ಅಧಿಕಾರಿಗಳು ಕೇರಳ ಪೊಲೀಸ್ ಮಹಾ ನಿರ್ದೇಶಕ ಲೋಕನಾಥ್ ಬೆಹೆರಾ ಅವರಿಗೆ ವರದಿ ಮಾಡಿದ್ದಾರೆ.
ಶಬರಿಮಲೆಗೆ ಭೇಟಿ ನೀಡುವ ಮಹಿಳೆಯರನ್ನು ಪ್ರತಿಭಟನಾಕಾರರಿಂದ ರಕ್ಷಿಸಲು ನಿಯೋಜಿಸಿರುವ ಪೊಲೀಸ್ ಅಧಿಕಾರಿಗಳು ತೀವ್ರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಬರಿಮಲೆಗೆ ಲಕ್ಷಾಂತರ ಭಕ್ತರು ಬರುತ್ತಿದ್ದಾರೆ. ಆದರೆ ಕೆಲವು ಯಾತ್ರಿಗಳು ಮುಂಚಿತವಾಗಿಯೇ ಸಾಮಾಜಿಕ ಮಾಧ್ಯಮದಲ್ಲಿ ಇಲ್ಲಿಗೆ ಬರುವ ಸಮಯ ಮತ್ತು ದಿನ ಘೋಷಿಸುವುದರಿಂದ ಅವರಿಗೆ ರಕ್ಷಣೆ ನೀಡುವುದು ಕಷ್ಟವಾಗುತ್ತಿದೆ ಎಂದು ಶಬರಿಮಲೆ ಭದ್ರತಾ ಉಸ್ತುವಾರಿ ವಹಿಸಿಕೊಂಡಿರುವ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಕಾರ್ಯಕರ್ತರು, ಹೋರಾಟಗಾರರ ಅಯ್ಯಪ್ಪಸ್ವಾಮಿ ದೇವಸ್ಥಾನ ಭೇಟಿ ತಡೆಯಲು ಪೊಲೀಸರಿಗೆ ಅನುಮತಿ ನೀಡಬೇಕು ಎಂದು ವರದಿ ಸಲಹೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com