ಸುಪ್ರೀಂ ಕೋರ್ಟ್ ತ್ರಿವಳಿ ತಲಾಕ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದು, ಅದನ್ನು ಕಾನೂನಾತ್ಮಕವಾಗಿ ಸಂಪೂರ್ಣ ತೆಗೆದು ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ತ್ರಿವಳಿ ತಲಾಕ್ ತಿದ್ದುಪಡಿ ಮಸೂದೆಯನ್ನು ಕಳೆದ ಡಿಸೆಂಬರ್ ನಲ್ಲಿ ಲೋಕಸಭೆಯಲ್ಲಿ ಅಂಗೀಕರಿಸಿತ್ತು. ಆದರೆ, ರಾಜ್ಯಸಭೆಯಲ್ಲಿ ಅನುಮೋದನೆ ಸಿಗದ ಕಾರಣ ಕಾಯ್ದೆಯಾಗಿ ರೂಪಗೊಂಡಿರಲಿಲ್ಲ. ಆದ್ದರಿಂದ, ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾಯ್ದೆ ಜಾರಿಗೆ ತಂದಿತ್ತು. ಸುಗ್ರಿವಾಜ್ಞೆಗೂ ಎರಡೂ ಸದನಗಳ ಒಪ್ಪಿಗೆ ಬೇಕಾದ ಕಾರಣ ಇಂದು ಮತ್ತೆ ಲೋಕಸಭೆಯಲ್ಲಿ ಮಂಡಿಸಿ ಅಂಗೀಕರಿಸಲಾಗಿದೆ.