ನಾನೆರಾ ಪೊಲೀಸ್ ಠಾಣೆಯ ಪೇದೆ ಸುರೇಶ್ ವತ್ಸ್ (48) ಮೃತ ಪೇದೆಯಾಗಿದ್ದಾರೆ. ನಿಶಾದ್ ಸಮುದಾಯಕ್ಕೆ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ನಿಶಾದ್ ಪಕ್ಷದ ಕಾರ್ಯಕರ್ತರು, ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆ ನಡೆಸುತ್ತಿದ್ದ ಜಾಗದಿಂದ ತೆರಳುವಂತೆ ಪೊಲೀಸ್ ಪೇದೆಗಳು ಸೂಚಿಸಿದಾಗ ಪ್ರತಿಭಟನಾ ನಿರತರು ಕಲ್ಲು ತೂರಾಟ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಸುರೇಶ್ ವತ್ಸ್ ಎಂಬ ಪೊಲೀಸ್ ಪೇದೆಯ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಪೇದೆ ಆ ವೇಳೆಗೆ ಮೃತಪಟ್ಟಿದ್ದರು.