ಮಾಧ್ಯಮವೊಂದ ವರದಿ ಮಾಡಿರುವಂತೆ ಶ್ರೀಗಳಿಗೆ ಕಫ ಹೆಚ್ಚಾಗಿ ಉಸಿರಾಟದಲ್ಲಿ ಸ್ವಲ್ಪ ಏರುಪೇರಾಗಿದೆ. ಶ್ರೀಗಳು ಈಗ ಆಕ್ಸಿಜನ್ ಮೂಲಕ ಉಸಿರಾಡುತ್ತಿದ್ದಾರೆ. ವೈದ್ಯರು ಶ್ರೀಗಳಿಗೆ ಮೂಗಿನ ಮೂಲಕ ಗ್ಲೂಕೋಸ್ ನೀಡುತ್ತಿದ್ದು, ಸ್ವಾಮೀಜಿಗಳಿಗೆ ಹೈಯರ್ ಆಂಟಿಬಯೋಟಿಕ್ ಹಾಗೂ ಫಿಸಿಯೋ ತೆರಪಿ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ದಗಂಗಾ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಶ್ರೀಗಳ ಮೇಲೆ ತೀವ್ರ ನಿಗಾ ವಹಿಸಿದ್ದಾರೆ.