ಪ್ರತಿಭಟನೆ ಪರಿಣಾಮ ಕೆಲವೆಡೆ ಸಂಚಾರ ದಟ್ಟಣೆ ಎದುರಾಗಿತ್ತು. ಹೀಗಾಗಿ ಸ್ಥಳಕ್ಕೆ ಧಾವಿಸಿದ್ದ ಸುರೇಶ್ ಅವರು, ಪ್ರತಿಭಟನಾ ಸ್ಥಳದಿಂದ ತೆರಳುವಂತೆ ಸೂಚಿಸಿದ್ದಾರೆ. ಇದರಿಂದ ಉದ್ರಿಕ್ರತಾದ ಪ್ರತಿಭಟನಾ ನಿರತರು, ಕಲ್ಲು ತೂರಾಟ ನಡೆಸಲು ಮುಂದಾಗಿದ್ದಾರೆ. ಈ ವೇಳೆ ಸುರೇಶ್ ಅವರ ತಲೆಗೆ ಬಲವಾದ ಪೆಟ್ಟು ಬಿದ್ದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದರು ಎಂದು ವರದಿಗಳು ತಿಳಿಸಿವೆ.