ಉಗ್ರನ ಕುಟುಂಬವನ್ನು ಭೇಟಿ ಮಾಡಿದ ಮೆಹಬೂಬಾ ಮುಫ್ತಿ, ರಾಜ್ಯಪಾಲರು, ಪೊಲೀಸರಿಗೇ ಎಚ್ಚರಿಕೆ!

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಕುಟುಂಬ ಸದಸ್ಯರನ್ನು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಭೇಟಿ ಮಾಡಿದ್ದಾರೆ.
ಭಯೋತ್ಪಾದಕರ ಕುಟುಂಬವನ್ನು ಭೇಟಿ ಮಾಡಿದ ಮೆಹಬೂಬಾ ಮುಫ್ತಿ, ರಾಜ್ಯಪಾಲರು, ಪೊಲೀಸರಿಗೇ ಎಚ್ಚರಿಕೆ!
ಭಯೋತ್ಪಾದಕರ ಕುಟುಂಬವನ್ನು ಭೇಟಿ ಮಾಡಿದ ಮೆಹಬೂಬಾ ಮುಫ್ತಿ, ರಾಜ್ಯಪಾಲರು, ಪೊಲೀಸರಿಗೇ ಎಚ್ಚರಿಕೆ!
Updated on
ಜಮ್ಮು: ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕರ ಕುಟುಂಬ ಸದಸ್ಯರನ್ನು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಭೇಟಿ ಮಾಡಿದ್ದಾರೆ. 
ಪುಲ್ವಾಮ ಜಿಲ್ಲೆಯಲ್ಲಿ ಭಯೋತ್ಪಾದಕನ ಸಹೋದರಿ ಹಾಗೂ ಆಕೆಯ ಪತಿಯನ್ನು ಪೊಲೀಸರು ಥಳಿಸಿದ್ದರು ಎಂಬ ಆರೋಪ ಕೇಳಿಬಂದಿದ್ದು, ಈ ಬೆನ್ನಲ್ಲೇ  ಮಾಜಿ ಸಿಎಂ ಮೆಹಬೂಬಾ ಮುಫ್ತಿ ಭೇಟಿ ಮಾಡಿದ್ದಾರೆ. 
ಉಗ್ರನ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಮೆಹಬೂಬಾ ಮುಫ್ತಿ, ಪೊಲೀಸರು ಭಯೋತ್ಪಾದಕನ ಸಹೋದರಿಯನ್ನು ಥಳಿಸಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ. ಇದೇ ವೇಳೆ ರಾಜ್ಯಪಾಲರು ಹಾಗೂ ಜಮ್ಮು-ಕಾಶ್ಮೀರದ ಪೊಲೀಸರಿಗೆ ಮೆಹಬೂಬಾ ಮುಫ್ತಿ ಎಚ್ಚರಿಕೆ ನೀಡಿದ್ದು, ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕೆಂದು ಹೇಳಿದ್ದಾರೆ. 
ಜಮ್ಮು-ಕಾಶ್ಮೀರದ ರಾಜ್ಯಪಾಲರು ಭಯೋತ್ಪಾದಕರ ವಿರುದ್ಧ ಹೋರಾಡುತ್ತಿದ್ದರೆ ಭಯೋತ್ಪಾದಕರ ಕುಟುಂಬ ಸದಸ್ಯರನ್ನು ಏಕೆ ಅದರಲ್ಲಿ ಎಳೆದುತರಬೇಕು ರಾಜ್ಯಪಾಲರು ಹಾಗೂ ಪೊಲೀಸರು ಈ ರೀತಿಯ ಕ್ರಮವನ್ನು ಮುಂದುವರೆಸಿದರೆ ಅದು ಅವರಿಗೆ ಕೆಟ್ಟ ಪರಿಣಾಮಗಳನ್ನು ಬೀರಲಿದೆ ಎಂದು ಮುಫ್ತಿ ಎಚ್ಚರಿಕೆ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com