ಮಲ್ಕಾಜ್ಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಜೆಎಲ್ ಎಸ್ ನಗರದಲ್ಲಿ ಈ ಘಟನೆ ನಡೆದಿದ್ದು, ಜ್ಯೋತಿ ಹೈಸ್ಕೂಲ್ ಸಿಬ್ಬಂದಿ ಶಾಲಾ ಶುಲ್ಕ ಪಾವತಿಸಿಲ್ಲವೆಂದು ಸಹಪಾಠಿಗಳ ಎದುರು 9ನೇ ತರಗತಿ ವಿದ್ಯಾರ್ಥಿನಿ ಸಾಯಿ ದೀಪ್ತಿಗೆ ಅವಮಾನ ಮಾಡಿದ್ದು, ಇದರಿಂದ ಬೇಸತ್ತ ವಿದ್ಯಾರ್ಥಿನಿ ‘ಅಮ್ಮಾ, ನನ್ನನ್ನು ಕ್ಷಮಿಸು’ ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.