ಅಂತೆಯೇ ದೆಹಲಿ ಸುಲ್ತಾನ ಅಲ್ಲಾವುದೀನ್ ಖಿಲ್ಜಿ ಮತ್ತು ಮೇವಾರ ರಾಣಿ ಪದ್ಮಾವತಿ ನಡುವೆ ಯಾವುದೇ ಸನ್ನಿವೇಶಗಳಿಲ್ಲ. ಚಿತ್ರದಲ್ಲಿ ನಮ್ಮ ಭಾವನೆಗಳಿಗೆ ಧಕ್ಕೆಯಾಗುವ ಅಂಶಗಳಿಲ್ಲ. ಅಲ್ಲದೆ ಘೂಮರ್ ಹಾಡಿನಲ್ಲಿದ್ದ ರಾಣಿ ಪದ್ಮಾವತಿ ವೇಷಧಾರಿ ದೀಪಿಕಾ ಪಡುಕೋಣೆ ಸೊಂಟದ ಭಾಗವನ್ನು ಗ್ರಾಫಿಕ್ಸ್ ಮೂಲಕ ಮುಚ್ಚಲಾಗಿದೆ. ಈ ಕಾರಣಕ್ಕೆ ರಾಜಸ್ಥಾನ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಗುಜರಾತ್ ಮತ್ತು ಹರ್ಯಾಣದ ಘಟಕಗಳಿಗೆ ಪತ್ರ ಬರೆಯಲಾಗಿದ್ದು, ಪ್ರತಿಭಟನೆ ವಾಪಸ್ ಪಡೆಯುವಂತೆ ಸೂಚನೆ ನೀಡಲಾಗಿದೆ. ದೇಶಾದ್ಯಂತ ಪದ್ಮಾವತ್ ಚಿತ್ರ ಬಿಡುಗಡೆಯಾಗುವಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.