ಮಹರಾಷ್ಟ್ರ: ಕೇವಲ 1 ರುಪಾಯಿಗಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಕೇವಲ ಒಂದು ರುಪಾಯಿಗಾಗಿ ನಡೆದ ಜಗಳವೊಂದು 54 ವರ್ಷದ ವ್ಯಕ್ತಿಯ ಕೊಲೆಯಲ್ಲಿ ಅಂತ್ಯಗೊಂಡಿರುವ ದಾರುಣ ಘಟನೆ ಮಹಾರಾಷ್ಟ್ರದ ಥಾಣೆಯ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಥಾಣೆ: ಕೇವಲ ಒಂದು ರುಪಾಯಿಗಾಗಿ ನಡೆದ ಜಗಳವೊಂದು 54 ವರ್ಷದ ವ್ಯಕ್ತಿಯ ಕೊಲೆಯಲ್ಲಿ ಅಂತ್ಯಗೊಂಡಿರುವ ದಾರುಣ ಘಟನೆ ಮಹಾರಾಷ್ಟ್ರದ ಥಾಣೆಯ ಕಲ್ಯಾಣ ಟೌನ್ ನಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಮೃತ ಮನೋಹರ್ ಗಮ್ನೆ ಅವರು ಸಮೀಪದ ಅಂಗಡಿಯಲ್ಲಿ ಮೊಟ್ಟೆ ಖರೀದಿಸಲು ತೆರಳಿದ್ದರು. ಈ ವೇಳೆ ಒಂದು ರುಪಾಯಿಗಾಗಿ ಅಂಗಡಿ ಮಾಲೀಕ ಮತ್ತು ಮನೋಹರ್ ಮಧ್ಯೆ ಜಗಳ ಆರಂಭವಾಗಿದ್ದು, ಅದು ಕೊಲೆಯಲ್ಲಿ ಅಂತ್ಯಗೊಂಡಿದೆ ಎಂದು ಥಾಣೆ ಪೊಲೀಸ್ ಪಿಆರ್ ಒ ಸುಖದ ನರ್ಕರ್ ಅವರು ತಿಳಿಸಿದ್ದಾರೆ.
ಮನೋಹರ್ ಅವರು ಮೊಟ್ಟೆಗೆ ಒಂದು ರುಪಾಯಿ ಕಡಿಮೆ ಕೊಟ್ಟಿದ್ದರು. ಇದರಿಂದ ಆಕ್ರೋಶಗೊಂಡ ಅಂಗಡಿ ಮಾಲೀಕ ಮನೋಹರ್ ಅವರನ್ನು ನಿಂದಿಸಿದ್ದಾರೆ. ನಂತರ ಪುತ್ರನೊಂದಿಗೆ ವಾಪಸ್ ಬಂದ್ ಮನೋಹರ್ ಅಂಗಡಿ ಮಾಲೀಕನೊಂದಿಗೆ ಮತ್ತೊಂದು ಸುತ್ತಿನ ಜಗಳ ನಡೆಸಿದ್ದಾರೆ. ಈ ವೇಳೆ ಅಂಗಡಿ ಮಾಲೀಕನ ಪುತ್ರ ಮನೋಹರ್ ಗೆ ಒದ್ದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ ಎಂದು ನರ್ಕರ್ ಹೇಳಿದ್ದಾರೆ.
ಆರೋಪಿ ಸುಧಾಕರ್ ಪ್ರಭು(45) ಅವರನ್ನು ಬಂಧಿಸಿದ್ದು, ಆತನ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ನರ್ಕರ್ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com