ದೇಗುಲದ ಆವರಣದಲ್ಲಿ ಸುಮಾರು ಐದಾರು ಆಂಗಡಿಗಳಿಗೆ ಬೆಂಕಿ ವ್ಯಾಪಿಸಿದ್ದು, ಅಗ್ನಿಶಾಮಕದಳದ ಒಟ್ಟು 5 ವಾಹನಗಳು ಮತ್ತು ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ವರೆಗೂ ಅಗ್ನಿ ಅವಘಡದಲ್ಲಿ ಸಾವು-ನೋವುಗಳಾದ ಕುರಿತು ವರದಿಯಾಗಿಲ್ಲ. ಘಟನಾ ಸ್ಥಳಕ್ಕೆ ಮಧುರೈ ಜಿಲ್ಲಾಧಿಕಾರಿ ದೌಡಾಯಿಸಿದ್ದು, ಕಾರ್ಯಾಚರಣೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ.