ಮಧುರೈ ಮೀನಾಕ್ಷಿ ದೇಗುಲದಲ್ಲಿ ಅಗ್ನಿ ಅವಘಡ, ಆಗ್ನಿಶಾಮಕ ದಳ ದೌಡು!

ತಮಿಳುನಾಡಿನ ಇತಿಹಾಸ ಪ್ರಸಿದ್ಧ ದೇಗುಲ ಮೀನಾಕ್ಷಿ ದೇಗುಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಆಗ್ನಿಶಾಮಕ ದಳದ ಸಿಬ್ಬಂದಿಗಳು ದೇಗುಲಕ್ಕೆ ದೌಡಾಯಿಸಿದ್ದಾರೆ.
ಮಧುರೈ ಮೀನಾಕ್ಷಿ ದೇಗುಲದಲ್ಲಿ ಅಗ್ನಿ ಅವಘಡ
ಮಧುರೈ ಮೀನಾಕ್ಷಿ ದೇಗುಲದಲ್ಲಿ ಅಗ್ನಿ ಅವಘಡ
Updated on
ಮಧುರೈ: ತಮಿಳುನಾಡಿನ ಇತಿಹಾಸ ಪ್ರಸಿದ್ಧ ದೇಗುಲ ಮೀನಾಕ್ಷಿ ದೇಗುಲದಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಆಗ್ನಿಶಾಮಕ ದಳದ ಸಿಬ್ಬಂದಿಗಳು ದೇಗುಲಕ್ಕೆ ದೌಡಾಯಿಸಿದ್ದಾರೆ.
ದೇಗುಲದ ಆವರಣದಲ್ಲಿ ಸುಮಾರು ಐದಾರು ಆಂಗಡಿಗಳಿಗೆ ಬೆಂಕಿ ವ್ಯಾಪಿಸಿದ್ದು, ಅಗ್ನಿಶಾಮಕದಳದ ಒಟ್ಟು 5 ವಾಹನಗಳು ಮತ್ತು ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ವರೆಗೂ ಅಗ್ನಿ ಅವಘಡದಲ್ಲಿ  ಸಾವು-ನೋವುಗಳಾದ ಕುರಿತು ವರದಿಯಾಗಿಲ್ಲ. ಘಟನಾ ಸ್ಥಳಕ್ಕೆ ಮಧುರೈ ಜಿಲ್ಲಾಧಿಕಾರಿ ದೌಡಾಯಿಸಿದ್ದು, ಕಾರ್ಯಾಚರಣೆಯ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. 
ಮೇಲ್ನೋಟಕ್ಕೆ ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದ್ದು, ಕಾರ್ಯಾಚರಣೆ ಬಳಿಕ ಈ ಬಗ್ಗೆ ಸ್ಪಷ್ಟ ಮಾಹಿತಿ ಲಭಿಸುವ ಸಾಧ್ಯತೆ ಇದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com