ಪಿಡಿಪಿ-ಬಿಜೆಪಿ ಮೈತ್ರಿಯನ್ನು ದುಷ್ಟಶಕ್ತಿಯೊಂದಿಗಿನ ಒಪ್ಪಂದ (ಡೀಲ್ ವಿತ್ ಡೆವಿಲ್) ಎಂದು ಜಮ್ಮು-ಕಾಶ್ಮೀರ ಮಾಜಿ ಸಿಎಂ ಓಮರ್ ಅಬ್ದುಲ್ಲಾ ಹೇಳಿದ್ದು, ಪ್ರತಿಪಕ್ಷ ನಾಯಕನ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ, ಕಾಶ್ಮೀರವನ್ನು ಉಳಿಸುವುದಕ್ಕಾಗಿ ನಾನು ನರಕಕ್ಕೆ ಹೋಗುವುದನ್ನು ಒಪ್ಪಿಕೊಳ್ಳುವುದಕ್ಕೂ ಸಿದ್ಧ ಎಂದು ಹೇಳಿದ್ದಾರೆ.