ಮದ್ರಾಸ್ ಹೈಕೋರ್ಟ್ ನಲ್ಲಿ ತಮಿಳು ಭಾಷೆಯನ್ನು ಅಧಿಕೃತ ಭಾಷೆಯೆಂದು ಘೋಷಣೆ ಮಾಡುವ ಕುರಿತು ಸಂಸದೆ ಶಶಿಕಲಾ ಪುಷ್ಪಾ ಅವರು ಕೇಳಿದ ಪ್ರಶ್ನೆಗೆ ರಾಜ್ಯಸಭೆಯಲ್ಲಿ ಉತ್ತರಿಸಿರುವ ಕಾನೂನು ಖಾತೆ ರಾಜ್ಯ ಸಚಿವ ಪಿ.ಪಿ.ಚೌಧರಿಯವರು, ತಮಿಳನಾಡು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಸಲಹೆಗಾಗಿ ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಲಾಗಿತ್ತು. ಸುದೀರ್ಘ ಮಾತುಕತೆ ಬಳಿ ನ್ಯಾಯಾಧೀಶರು ಪ್ರಸ್ತಾವನೆ ನಿರಾಕರಿಸಿದರು ಎಂದು ಹೇಳಿದ್ದಾರೆ.