ಭುವನೇಶ್ವರ: ಒಡಿಶಾದ ಖರ್ದು ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 76.5 ಲಕ್ಷ ರುಪಾಯಿ ಮೌಲ್ಯದ 15 ಚಿನ್ನದ ಬಿಸ್ಕಿಟ್ ಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್ಐ) ಅಧಿಕಾರಿಗಳು ಸೋಮವಾರ ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಡಿಐಆರ್ ಅಧಿಕಾರಿಗಳು 2.494 ಕಿಜೆ ಚಿನ್ನದೊಂದಿಗೆ ಗುವಾಹಟಿ- ಚೆನ್ನೈ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಚಿನ್ನದ ಬಿಸ್ಕಿಟ್ ಗಳನ್ನು ಜಪ್ತಿ ಮಾಡಿದ್ದಾರೆ.
ಶೋಧ ಕಾರ್ಯಾಚರಣೆ ವೇಳೆ ಆರೋಪಿ ಈ ಭಾರೀ ಮೊತ್ತದ ಚಿನ್ನದ ಚಿನ್ನದ ಬಿಸ್ಕಿಟ್ ಗಳನ್ನು ಶೂ ನಲ್ಲಿ ಮತ್ತು ನಡುವಂಗಿಯಲ್ಲಿ ಅಡಗಿಸಿಟ್ಟುಕೊಂಡಿದ್ದು ಪತ್ತೆಯಾಗಿದೆ ಎಂದು ಡಿಐಆರ್ ಹೆಚ್ಚುವರಿ ನಿರ್ದೇಶಕರು ತಿಳಿಸಿದ್ದಾರೆ.