ಇನ್ನು ಗ್ರಾಹಕರ ರಕ್ಷಣಾ ವೇದಿಕೆಯಲ್ಲಿ ದೂರಿನ ವಿಚಾರಣೆ ನಡೆದಿದ್ದು, ಈ ವೇಳೆ ಬ್ಯಾಂಕ್ ಲಾಕರ್ ನಲ್ಲಿದ್ದ ಬೆಳ್ಳಿ ಆಭರಣ ನಾಪತ್ತೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಅಲ್ಲದೆ ಈ ಸಂಬಂಧ ಬ್ಯಾಂಕ್ ನಿಂದಲೇ ಲೋಪವಾಗಿದೆ ಎಂದು ಗ್ರಾಹಕರ ರಕ್ಷಣಾ ಕೋರ್ಟ್ ಅಭಿಪ್ರಾಯಪಟ್ಟಿದ್ದು, ಕೂಡಲೇ ಸಂತ್ರಸ್ಥ ಮಹಿಳೆ ಲಕ್ಷ್ಮೀ ಜಯರಾಮನ್ ಅವರಿಗೆ 1.5 ಲಕ್ಷ ರೂ ಪರಿಹಾರ ನೀಡುವಂತೆ ಆದೇಶ ನೀಡಿದೆ. ಪ್ರಕರಣದ ವಿಚಾರಣೆ ನಡೆಸಿದ ಸಿಇಆರ್ ಎಸ್ ಮುಖ್ಯಸ್ಥ ಎಂ ಮೋನಿ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದು, ಇಂಡಿಯನ್ ಬ್ಯಾಂಕ್ ಕೂಡಲೇ ಲಕ್ಷ್ಮೀ ಜಯರಾಮನ್ ಅವರಿಗೆ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ. ಇದಲ್ಲದೆ 15 ಸಾವಿರ ರೂ ಹಣವನ್ನು ಮಾನಸಿಕ ಸಂಕಟ ಆಧಾರದ ಮೇಲೆ ನೀಡುವಂತೆ ಆದೇಶಿಸಿದೆ.