ಇನ್ನು ಗ್ರಾಮಕ್ಕೆ ಹೊಂದಿಕೊಂಡಂತೆ ಹೆದ್ದಾರಿ ಇದ್ದು, ಇಲ್ಲಿ ಚಲಿಸುವ ಟ್ರಕ್ ಚಾಲಕರು ವೈದ್ಯನ ಬಳಿ ಚಿಕಿತ್ಸೆ ಪಡೆದಿರುವ ಸಾಧ್ಯತೆ ಇದ್ದು, ಇದೇ ಸಿರಿಂಜ್ ಅನ್ನೇ ಗ್ರಾಮಸ್ಥರ ಚಿಕಿತ್ಸೆಗೂ ಬಳಕೆ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಮುಂದಿನ ಕಾರ್ಯಾಚರಣೆಗಳ ಕುರಿತು ವೈದ್ಯಾಧಿಕಾರಿಗಳೊಂದಿಗೆ ಚರ್ಚಿದೆ ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.