ಪ್ರಧಾನಿ ಮೋದಿ ಅವರು ಸಂದರ್ಶನವೊಂದರಲ್ಲಿ ಪಕೋಡ ಮರಾಟ ಮಾಡುವುದೂ ಒಂದು ಉದ್ಯೋಗ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಚಿದಂಬರಂ ಅವರು, ಪಕೋಡಾ ಮಾರುವುದೂ ಒಂದು ಉದ್ಯೋಗ ಎಂಬುದಾದರೆ ಭಿಕ್ಷೆ ಬೇಡುವುದೂ ಒಂದು ಉದ್ಯೋಗವೇ. ಇನ್ನು ಮೇಲೆ ತಮ್ಮ ಬದುಕನ್ನು ನಡೆಸುವುದಕ್ಕಾಗಿ ಭಿಕ್ಷೆ ಬೇಡುವ ಬಡ ಮತ್ತು ದುರ್ಬಲ ವರ್ಗದ ಜನರನ್ನೂ ಉದ್ಯೋಗಿಗಳು ಎಂದು ಪರಿಗಣಿಸೋಣ ಎಂದು ಚಿದಂಬರಂ ವ್ಯಂಗ್ಯವಾಡಿದ್ದರು.