ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿರುವ ನಿತಿನ್ ಗಡ್ಕರಿ ಅವರು, ನಮಾಮಿ ಗಂಗೆ ಯೋಜನೆಯಡಿಯಲ್ಲಿ ಜಾರಿ ಮಾಡಲಾಗಿರುವ ವಿವಿಧ ಯೋಜನೆಗಳು ಶೀಘ್ರದಲ್ಲೇ ಪೂರ್ಣಗೊಳ್ಳಲಿದ್ದು, ನದಿ ಶುದ್ಧೀಕರಣಕ್ಕಾಗಿ ಕೇಂದ್ರ ಸರ್ಕಾರ ಸುಮಾರು 20 ಸಾವಿರ ಕೋಟಿ ರು.ಗಳನ್ನು ವ್ಯಯಿಸಿದೆ. ಪ್ರಮುಖವಾಗಿ ಮುಂಬರುವ ಕುಂಭಮೇಳದ ಒಳಗೆ ಗಂಗಾನದಿಯ ಶೇ.80ರಷ್ಚನ್ನು ಸ್ವಚ್ಛಗೊಳಿಸುವ ವಿಶ್ವಾಸವಿದೆ. ನಮಾಮಿ ಗಂಗೆ ಯೋಜನೆಯಡಿಯಲ್ಲಿ ಒಟ್ಟು 189 ಯೋಜನೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಪೈಕಿ ಈಗಾಗಲೇ 47 ಯೋಜನೆಗಳು ಪೂರ್ಣಗೊಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಯೋಜನೆಗಳು ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ಹೇಳಿದರು.