ಕಣಿವೆ ರಾಜ್ಯದಲ್ಲಿ ಪಾಕ್‍ನಿಂದ ಗುಂಡಿನ ದಾಳಿ; 3 ಭಾರತೀಯ ಯೋಧರಿಗೆ ಗಾಯ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು ಈ ಗುಂಡಿನ...
ಭಾರತೀಯ ಸೇನೆ
ಭಾರತೀಯ ಸೇನೆ
ಜಮ್ಮು: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಪಾಕಿಸ್ತಾನ ಸೈನಿಕರು ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದ್ದು ಈ ಗುಂಡಿನ ದಾಳಿಯಲ್ಲಿ ಮೂವರು ಭಾರತೀಯ ಯೋಧರು ಗಾಯಗೊಂಡಿದ್ದಾರೆ. 
ಅಂತಾರಾಷ್ಟ್ರೀಯ ಗಡಿಯ ಕೃಷ್ಣಗಾಟಿ ಸೆಕ್ಟರ್ ಬಳಿ ಪಾಕ್ ಸೈನಿಕರು ನಿರಂತರವಾಗಿ ಗುಂಡಿನ ದಾಳಿ ನಡೆಸುತ್ತಿದ್ದಾರೆ. ಇದಕ್ಕೆ ಭಾರತೀಯ ಯೋಧರು ಸಹ ತಕ್ಕ ಪ್ರತ್ಯುತ್ತರ ನೀಡುತ್ತಿದ್ದಾರೆ. 
ಪಾಕ್ ಸೈನಿಕರ ಗುಂಡಿನ ದಾಳಿಯಲ್ಲಿ ಮೂವರು ಭಾರತೀಯ ಯೋಧರಿಗೆ ಸಣ್ಣ ಗಾಯಗಳಾಗಿದ್ದು ಅವರಿಗೆ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಗಡಿಯಲ್ಲಿ ಪಾಕ್ ಸೈನಿಕರು ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ 45 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com