ಪ್ರತಿಭಟನೆಗೆ ಕಾಶ್ಮೀರ ಕಣಿವೆಯಲ್ಲಿ ಜನಜೀವನ ಅಸ್ತವ್ಯಸ್ಥ

ಭಯೋತ್ಪಾದಕ ಅಫ್ಜಲ್ ಗುರುವಿಗೆ ಗಲ್ಲುಶಿಕ್ಷೆ ವಿಧಿಸಿದ 5 ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಬಂದ್ ಗೆ ಕರೆ ನೀಡಿದ್ದು, ಕಣಿವೆ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ.
ಕಾಶ್ಮೀರ
ಕಾಶ್ಮೀರ
Updated on
ಶ್ರೀನಗರ: ಭಯೋತ್ಪಾದಕ ಅಫ್ಜಲ್ ಗುರುವಿಗೆ ಗಲ್ಲುಶಿಕ್ಷೆ ವಿಧಿಸಿದ 5 ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿಗಳು ಬಂದ್ ಗೆ ಕರೆ ನೀಡಿದ್ದು, ಕಣಿವೆ ರಾಜ್ಯದಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. 
ಅಂಗಡಿ ಮುಂಗಟ್ಟುಗಳು, ವ್ಯಾಪಾರ ವಹಿವಾಟು ನಡೆಸುವ ಕೇಂದ್ರಗಳು ಬಂದ್ ಆಗಿದ್ದು, ಕೇವಲ ಬೆರಳೆಣಿಕೆಯಷ್ಟೇ ವಾಹನಗಳು ಸಂಚರಿಸುತ್ತಿದ್ದವು. ಸಾರ್ವಜನಿಕ ಸಾರಿಗೆ ವ್ಯವಸ್ಥೆಯ ಮೇಲೂ ಬಂದ್ ಪರಿಣಾಮ ಬೀರಿದ್ದು, ಸರ್ಕಾರಿ ಕಚೇರಿ ಹಾಗೂ ಬ್ಯಾಂಕ್ ಗಳಲ್ಲಿನ ಹಾಜರಾತಿಯೂ ಕಡಿಮೆ ಇತ್ತು. 
ಉಗ್ರ ಅಫ್ಜಲ್ ಗುರುಗೆ ಗಲ್ಲು ಶಿಕ್ಷೆ ಜಾರಿಗೊಳಿಸಿರುವುದನ್ನು ವಿರೋಧಿಸಿ ಪ್ರತ್ಯೇಕತಾವಾದಿಗಳು ಬಂದ್ ಗೆ ಕರೆ ನೀಡಿದ್ದರು. 2013 ರ ಫೆ.09 ರಂದು ಅಫ್ಜಲ್ ಗುರುಗೆ ಗಲ್ಲು ಶಿಕ್ಷೆ ಜಾರಿಗೊಳಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com