ಆಸ್ಪತ್ರೆ ವೆಚ್ಚ, ವೈದ್ಯಕೀಯ ಸೇವೆಯಂತಹ ಅಗತ್ಯ ಸೇವೆಗಳನ್ನು ಆಧಾರ್ ಸಂಖ್ಯೆ ಇಲ್ಲವೆಂದು ಫಲಾನುಭವಿಗಳಿಗೆ ನಿರಾಕರಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಪ್ರಾಧಿಕಾರ ಈ ಸುತ್ತೋಲೆ ಹೊರಡಿಸಿದೆ. ಫಲಾನುಭವಿಗಳಿಗೆ ಆಧಾರ್ ಸಂಖ್ಯೆಯಿಲ್ಲವೆಂದು ಅಗತ್ಯ ಸೇವೆಗಳನ್ನು ನೀಡಲು ನಿರಾಕರಿಸಿದ್ದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ಸಹ ನೀಡಿದೆ.