ಭಾರತೀಯ ಸೇನಾ ಶಿಬಿರದ ಮೇಲೆ ಜೈಷ್ ಇ ಮೊಹಮದ್ ಉಗ್ರರು ನಿನ್ನೆ ಮುಂಜಾನೆ ದಾಳಿ ಮಾಡಿದ್ದು, ಉಗ್ರರ ವಿರುದ್ಧ ಸೇನೆ ಆರಂಭಿಸಿರುವ ಉಗ್ರ ನಿಗ್ರಹ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಏತನ್ಮಧ್ಯೆ ಅತ್ತ ಸೈನಿಕರು ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ನಿರತರಾಗಿರುವುದರಿಂದ ಸೇನಾ ಸಿಬ್ಬಂದಿಗೆ ರವಾನೆಯಾಗುತ್ತಿದ್ದ ಆಹಾರ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಇದನ್ನು ಮನಗಂಡಿರುವ ಸ್ಥಳೀಯರು ಸೈನಿಕರಿಗೆ ತಮ್ಮ ತಮ್ಮ ಮನೆಯಿಂದಲೇ ಊಟ ಮತ್ತು ನೀರಿನ ಪೂರೈಕೆ ಮಾಡುತ್ತಿದ್ದಾರೆ.