ದೇಶದ ಪ್ರಮುಖ ಶಿವನ ದೇಗುಲಗಳಾದ ಕೇದಾರನಾಥ, ಕಾಶಿ ವಿಶ್ವನಾಥ, ದಿಯೋಘಡ್ ನ ಬೈದ್ಯನಾಥ ದೇಗುಲ, ಓಂಕಾರೇಶ್ವರ ದೇಗುಲ, ಕುಲ್ದಾಬಾದ್ ನ ಗ್ರಿಶ್ನೇಶ್ವರ ದೇಗುಲ, ಸೋಮನಾಥೇಶ್ವರ ದೇಗುಲ, ಶ್ರೀಶೈಲಂನ ಮಲ್ಲಿಕಾರ್ಜುನ ದೇಗುಲಗಳಲ್ಲಿ ಬೆಳಗಿನ ಜಾವದಿಂದಲೇ ವಿಶೇಷ ಅಭಿಷೇಕ ಮತ್ತು ಪೂಜೆ ನೆರವೇರಿಸಲಾಗುತ್ತಿದೆ. ಅಂತೆಯೇ ಮಧ್ಯ ಪ್ರದೇಶದ ಉಜ್ಜೈನ್ ಮಹಾಕಾಳೇಶ್ವರ ದೇಗುದಲ್ಲಿ ಭಸ್ಮಾರತಿ ಪೂಜೆ ನಡೆಸಲಾಗಿದ್ದು, ಪುಣೆಯ ಭೀಮಶಂಕರ ದೇಗುಲ, ಮುಂಬೈನ ಬಬುಲ್ ನಾಥ್ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಸಲಾಗುತ್ತಿದೆ.