ಅಧಿಕಾರಿಗಳು ತಿಳಿಸಿರುವಂತೆ ಸಾಗರ್ ಭೂಷಣ್ ನೌಕೆ ದುರಸ್ತಿಗಾಗಿ ಕೊಚ್ಚಿ ಬಂದರಿನಲ್ಲಿ ಲಂಗರು ಹಾಕಿತ್ತು. ನೌಕೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲೇ ಸ್ಫೋಟ ಸಂಭವಿಸಿದೆ. ಇಂಧನ ಟ್ಯಾಂಕ್ ಬಳಿ ಸ್ಫೋಟ ಸಂಭವಿಸಿದ್ದು, ಸ್ಫೋಟಕ್ಕೆ ಶಂಕಿತ ಇಂಧನ ಸೋರಿಕೆ ಕಾರಣವಾಗಿರಬಹುದು ಎನ್ನಲಾಗಿದೆ. ಸ್ಫೋಟ ಸಂಭವಿಸಿದ್ದ ವೇಳೆ ನೌಕೆಯಲ್ಲಿ 20ಕ್ಕೂ ಹೆಚ್ಚು ಸಿಬ್ಬಂದಿ ಇದ್ದರು ಎಂದು ಹೇಳಲಾಗುತ್ತಿದ್ದು, ಗಾಯಾಳುಗಳನ್ನು ಕೊಚ್ಚಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.