ಕೇರಳದ ಕಣ್ಣೂರಿನಲ್ಲಿ ಹತ್ಯಾ ರಾಜಕೀಯ ಮುಂದುವರೆದಿದ್ದು, ನಿನ್ನೆ ಯೂತ್ ಕಾಂಗ್ರೆಸ್ ಮುಖಂಡ 30 ವರ್ಷದ ಶುಹೈಬ್ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆ ಗೈದಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಕಣ್ಣೂರಿನಲ್ಲಿ ಸ್ಥಳೀಯ ಯೂತ್ ಕಾಂಗ್ರೆಸ್ ಮುಖಂಡ ಹಾಗೂ ಆತನ ಮತ್ತೋರ್ವ ಸ್ನೇಹಿತ ಮಾತನಾಡುತ್ತಿದ್ದಾಗ, ಅಲ್ಲಿಗೆ ಆಗಮಿಸಿದ ದುಷ್ಕರ್ಮಿಗಳು ಅವರತ್ತ ನಾಡಬಾಂಬ್ ಎಸೆದು ಬಳಿಕ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ 30 ವರ್ಷದ ಶುಹೈಬ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.